ಸ್ಯಾಂಡಲ್ವುಡ್ ಕ್ವೀನ್ ಆಗಿರುವ ನಟಿ ರಮ್ಯಾ ಅವರು ಕನ್ನಡ ಚಿತ್ರರಂಗದಿಂದ ಸಾಕಷ್ಟು ವರ್ಷಗಳ ಕಾಲ ದೂರವಿದ್ದರು. ನಿಜಕ್ಕೂ ಕೂಡ ಇದು ಅವರ ಅಭಿಮಾನಿಗಳಲ್ಲಿ ಸಾಕಷ್ಟು ಬೇಸರವನ್ನು ಉಂಟು ಮಾಡಿತ್ತು. ರಾಜಕೀಯ ಕಾರಣದಿಂದಾಗಿ ಚಿತ್ರರಂಗದಿಂದ ಅವರು ದೂರವಿದ್ದಿದ್ದು ನಿಜಕ್ಕೂ ಕೂಡ ಹಲವಾರು ಜನರ ಮನಸ್ಸಿನಲ್ಲಿ ಯಾವಾಗ ಮತ್ತೆ ಅವರು ಚಿತ್ರರಂಗದಲ್ಲಿ ಕಾಣಿಸಿಕೊಳ್ಳುತ್ತಾರೆ ಎಂಬ ಕಾತುರತೆಯನ್ನು ಹುಟ್ಟು ಹಾಕಿತ್ತು.
ಕೊನೆಗೂ ಕೂಡ ಇತ್ತೀಚಿಗಷ್ಟೇ ಸ್ವಾತಿ ಮುತ್ತಿನ ಮಳೆ ಹನಿಯ ಸಿನಿಮಾದ ಮೂಲಕ ನಟಿ ರಮ್ಯಾ ಅವರು ಮತ್ತೆ ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ ಎಂಬುದಾಗಿ ಅಧಿಕೃತವಾಗಿ ಸುದ್ದಿ ಹೊರಬಂದಿತ್ತು. ಆದರೆ ನಂತರ ಈ ಸಿನಿಮಾದಲ್ಲಿ ರಮ್ಯಾ ಅವರು ನಟಿಸುತ್ತಿಲ್ಲ ಕೇವಲ ನಿರ್ಮಾಣ ಮಾಡುತ್ತಿದ್ದಾರೆ ಎಂಬ ಸುದ್ದಿಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಡಲು ಆರಂಭಿಸಿತು. ಈಗ ರಮ್ಯಾ ಮತ್ತೊಂದು ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಮತ್ತೊಮ್ಮೆ ನಾಯಕ ನಟಿಯಾಗಿ ಕಾಲಿಡುತ್ತಿದ್ದಾರೆ ಎಂಬ ಅಧಿಕೃತ ಮಾಹಿತಿ ಹೊರ ಬಂದಿದೆ.
ಹೌದು ಮಿತ್ರರೇ ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಅವರು ಧನಂಜಯ ನಾಯಕನಾಗಿ ಕಾಣಿಸಿಕೊಂಡಿರುವ ಉತ್ತರಕಾಂಡ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುವ ಮೂಲಕ ಮತ್ತೆ ಕನ್ನಡ ಚಿತ್ರರಂಗಕ್ಕೆ ನಾಯಕನಟಿಯಾಗಿ ಕಾಲಿಡುತ್ತಿದ್ದಾರೆ. ಇದನ್ನು ನಿನ್ನೆ ಡಾಲಿ ಧನಂಜಯ್ ಅವರೇ ಸ್ವತಃ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ಬಹಿರಂಗಪಡಿಸಿದ್ದಾರೆ. ನಿಮಗೆಲ್ಲರಿಗೂ ನೆನಪಿರಬಹುದು ಡಾಲಿ ಧನಂಜಯ್ ನಟನೆಯ ರತ್ನನ್ ಪ್ರಪಂಚ ಸಿನಿಮಾದ ಮೂಲಕವೇ ರಮ್ಯ ಅವರು ನಾಯಕಿಯಾಗಿ ಕಂಬ್ಯಾಕ್ ಮಾಡಬೇಕಾಗಿತ್ತು ಆದರೆ ಅದು ಸಾಧ್ಯವಾಗಿರಲಿಲ್ಲ.
ಈಗ ಅದೇ ರತ್ನನ್ ಪ್ರಪಂಚ ಚಿತ್ರತಂಡದೊಂದಿಗೆ ಉತ್ತರಕಾಂಡ ಎನ್ನುವ ಸಿನಿಮಾದ ಮೂಲಕ ಡಾಲಿ ಧನಂಜಯ್ ಅವರಿಗೆ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನೆಮಾವನ್ನು ಕೆ ಆರ್ ಜಿ ಸ್ಟುಡಿಯೋಸ್ ನ ಕಾರ್ತಿಕ್ ಗೌಡ ಅವರು ನಿರ್ಮಾಣ ಮಾಡುತ್ತಿದ್ದಾರೆ. ಸಿನಿಮಾ ಮಾಸ್ ಹಾಗೂ ಭೂ’ಗತ ಲೋಕದ ಕಥೆಯನ್ನು ಹೊಂದಿದೆ ಎಂಬುದಾಗಿ ತಿಳಿದು ಬಂದಿದ್ದು ಸಿನಿಮಾ ಯಾವ ರೀತಿಯಲ್ಲಿ ಮೂಡಿ ಬರುತ್ತದೆ ಎಂಬುದನ್ನು ಮುಂದಿನ ದಿನಗಳಲ್ಲಿ ಕಾದು ನೋಡಬೇಕಾಗಿದೆ.