ಚಪ್ಪಲಿ ಕಾಂಟ್ರವರ್ಸಿ ಬೆನ್ನಲ್ಲೇ ಡಿ ಬಾಸ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾದ ರಮ್ಯ. ಕಾರಣ ಕೇಳಿದರೆ ನೀವು ಕೂಡ ಆಶ್ಚರ್ಯ ಪಡ್ತೀರ.

ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲಿ ಕೂಡ ಈಗ ಡಿ ಬಾಸ್ ಅವರಿಗೆ ಹೊಸಪೇಟೆಯಲ್ಲಿ ಚಪ್ಪಲಿ ಎಸೆದಿರುವ ಹಿನ್ನೆಲೆಯಲ್ಲಿ ಪ್ರತಿಭಟನೆಗಳು ಹಾಗೂ ಆಕ್ರೋಶಗಳು ಕಂಡು ಹಾಗೂ ಕೇಳಿ ಬರುತ್ತಿವೆ. ಪ್ರತಿಯೊಬ್ಬರೂ ಕೂಡ ಈ ವಿಚಾರದಲ್ಲಿ ತಮ್ಮ ಅಸಮಾಧಾನವನ್ನು ಹೊರ ಹಾಕುತ್ತಿದ್ದಾರೆ. ಡಿ ಬಾಸ್ ಹಾಗೂ ಅಪ್ಪು ಅಭಿಮಾನಿಗಳ ನಡುವೆ ಈಗಾಗಲೇ ದೊಡ್ಡ ಕಂದಕವೇ ನಿರ್ಮಾಣವಾಗಿದೆ ಎಂದು ಹೇಳಬಹುದಾಗಿದೆ. ಇದು ನಿಜಕ್ಕೂ ಕೂಡ ಕನ್ನಡ ಚಿತ್ರರಂಗದ ಬೆಳವಣಿಗೆಗೆ ಕಂಟಕ ವಾಗುವಂತಹ ವಿಚಾರ ಎನ್ನಬಹುದಾಗಿದೆ.

ಇದರ ನಡುವಲ್ಲಿ ಕನ್ನಡ ಚಿತ್ರರಂಗದ ಹಲವಾರು ಗಣ್ಯ ನಟರು ಕೂಡ ದರ್ಶನ್ ಅವರ ಪರವಾಗಿ ಹಾಗೂ ಈ ಘಟನೆಯನ್ನು ಖಂಡಿಸಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಕರುನಾಡ ಚಕ್ರವರ್ತಿ ಶಿವಣ್ಣ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸೇರಿದಂತೆ ಹಲವಾರು ಗಣ್ಯಾತಿ ಗಣ್ಯರು ಕೂಡ ಈ ವಿಚಾರದ ಕುರಿತಂತೆ ಮಾತನಾಡಿ ಕನ್ನಡ ಚಿತ್ರರಂಗ ಒಂದೇ ಕುಟುಂಬ ಈ ರೀತಿಯ ಕೃತ್ಯಗಳನ್ನು ಖಂಡಿಸುತ್ತೇವೆ ಎಂಬುದಾಗಿ ಹೇಳಿದ್ದಾರೆ. ಇದರ ನಡುವೆ ಕನ್ನಡ ಚಿತ್ರರಂಗದ ಮೋಹಕತಾರೆ ರಮ್ಯಾ ಡಿ ಬಾಸ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ದರ್ಶನ್ ಅವರ ವಿಚಾರದಲ್ಲಿ ದರ್ಶನ್ ಅವರಿಗೆ ಬೆಂಬಲವನ್ನು ಸೂಚಿಸಿದರು ಕೂಡ ನಟಿ ರಮ್ಯಾ ಅವರು ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ದರ್ಶನ್ ಅವರ ಅಭಿಮಾನಿಗಳು ಮಾಡುತ್ತಿರುವ ವೈಯಕ್ತಿಕ ನಿಂದನೆಗಳನ್ನು ಸ್ಕ್ರೀನ್ಶಾಟ್ ಗಳ ಮೂಲಕ ಸಾಕ್ಷಿ ಸಮೇತ ನೀಡಿ ಇದರ ಕುರಿತಂತೆ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ.

ರಮ್ಯಾ ಅವರ ತಮ್ಮ ಟ್ವಿಟರ್ ಖಾತೆಯಲ್ಲಿ ಡಿ ಬಾಸ್ ಅಭಿಮಾನಿಗಳು ಹೆಣ್ಣು ಮಕ್ಕಳಿಗೆ ಸಂಬಂಧಿಸಿದ ಕೆಳಮಟ್ಟದ ಪದಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಬಾಯಿಗೆ ಬಂದ ಹಾಗೆ ಬರೆಯುವ ಮೂಲಕ ಅಭಿಮಾನಿಗಳ ಮೌಲ್ಯವನ್ನು ತಗ್ಗಿಸುತ್ತಿದ್ದಾರೆ ಎಂಬುದಾಗಿ ರಮ್ಯಾ ಅವರು ಹೇಳಿಕೆ ನೀಡಿದ್ದಾರೆ.

ರಮ್ಯಾ ರವರು ಇದನ್ನು ಕೇವಲ ಉದಾಹರಣೆಯಾಗಿ ನೀಡಿದ್ದು ಇತ್ತೀಚಿನ ದಿನಗಳಲ್ಲಿ ಅಭಿಮಾನಿಗಳು ಹಾಗೂ ಫ್ಯಾನ್ಸ್ ಕ್ಲಬ್ ಗಳು ಮೊದಲನೆಯ ಹಾಗೆ ಘನತೆ ಹಾಗೂ ಗೌರವಗಳನ್ನು ಹೊಂದಿಲ್ಲ ಎಂಬುದಾಗಿ ರಮ್ಯಾ ಹೇಳಿದ್ದಾರೆ. ಇಂತಹ ಖಾತೆಗಳನ್ನು ಟ್ವಿಟರ್ ಬ್ಲಾಕ್ ಮಾಡಬೇಕು ಎಂಬುದಾಗಿ ರಮ್ಯಾ ಅವರು ಅಭಿಪ್ರಾಯಪಟ್ಟಿದ್ದಾರೆ.

ಇದಕ್ಕೆ ಡಿ ಬಾಸ್ ಅಭಿಮಾನಿಗಳು ಕೋಪಗೊಂಡಿದ್ದು ನೀವು ಕೇವಲ ನಮ್ಮ ಮೇಲೆ ಟಾರ್ಗೆಟ್ ಮಾಡಿ ಈ ರೀತಿ ಹೇಳುತ್ತಿರುವುದು ಸರಿಯಲ್ಲ ಎಂಬುದಾಗಿ ಮರು ಉತ್ತರವನ್ನು ನೀಡಿದ್ದಾರೆ. ಈ ಬಗ್ಗೆ ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು ನಮ್ಮೊಂದಿಗೆ ತಪ್ಪದೆ ಕಾಮೆಂಟ್ ಮಾಡುವ ಮೂಲಕ ಹಂಚಿಕೊಳ್ಳಿ.

Leave a Comment

error: Content is protected !!