ನಮಸ್ತೆ ಸ್ನೇಹಿತರೇ.. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಕನ್ನಡ ಚಿತ್ರರಂಗದಲ್ಲಿ ಎಷ್ಟೆಲ್ಲಾ ಕೊಡುಗೆಗಳನ್ನು ನೀಡಿದ್ದಾರೆ ಎಂಬುದು ನಿಮಗೆ ಗೊತ್ತಿರುವ ವಿಚಾರವಾಗಿದೆ. ಅದೆಷ್ಟೋ ಜನರಿಗೆ ಯಾರಿಗೂ ಗೊತ್ತಿಲ್ಲದ ಹಾಗೆ ತಾವೇ ತಮ್ಮ ಕೈಯಾರೆ ಆರ್ಥಿಕ ಸಹಾಯ ಸೇರಿದಂತೆ ಅವರಿಗೆ ಬೇಕಾಗಿರುವಂತಹ ಎಲ್ಲಾ ಅಗತ್ಯ ಸಹಾಯಗಳನ್ನು ಕೂಡ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರೇ ನೀಡಿದ್ದಾರೆ.
ಚಿತ್ರರಂಗದಲ್ಲಿ ಕೂಡ ಹಲವಾರು ಕಲಾವಿದರಿಗೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಸಹಾಯ ಮಾಡಿದ್ದಾರೆ. ಕೇವಲ ಎಷ್ಟು ಮಾತ್ರವಲ್ಲದೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ವೃದ್ಧಾಶ್ರಮ ಅನಾಥಾಶ್ರಮ ಸರ್ಕಾರಿ ಶಾಲೆಗಳು ಸೇರಿದಂತೆ ಗೋಶಾಲೆಗಳನ್ನು ಕೂಡ ರಾಜ್ಯಾದ್ಯಂತ ಹಲವಾರು ಕಡೆಗಳಲ್ಲಿ ನಡೆಸುತ್ತಿದ್ದಾರೆ ಎಂಬ ಅಧಿಕೃತ ಮಾಹಿತಿಗಳು ಕೂಡ ಇವೆ.
ಹೀಗಿರುವ ಈ ಸಂದರ್ಭದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಮರಣ ಹೊಂದಿ ವರ್ಷಗಳ ನಂತರವೂ ಕೂಡ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ವಿರುದ್ಧ ಅವಹೇಳನಕಾರಿ ಆಗುವಂತಹ ಪೋಸ್ಟ್ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿಕೊಂಡು ಓಡಾಡುತ್ತಿದ್ದಾರೆ. ಇದನ್ನು ನಿಜಕ್ಕೂ ಕೂಡ ಅಕ್ಷ್ರಮ್ಯ ಎನ್ನಬಹುದಾದಂತಹ ಅಪರಾಧವಾಗಿದೆ ಎಂದರೆ ತಪ್ಪಾಗಲಾರದು.
ಹೌದು ಸಾಮಾಜಿಕ ಜಾಲತಾಣಗಳಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಯಾವುದೇ ರೀತಿಯ ಜನಸೇವೆಗಳನ್ನು ಮಾಡಿಲ್ಲ ಕೇವಲ ಅದು ಶುದ್ಧ ಸುಳ್ಳು ಎಂಬ ರೀತಿಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳು ಪೋಸ್ಟ್ ಮಾಡಿ ಇಟ್ಕೊಂಡು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಗೋವುಳಿಗೆ ದನಗಳಿಗೆ ಮತ್ತು ಪ್ರಾಣಿ ಪಕ್ಷಿಗಳಿಗೆ ದರ್ಶನ್ ಅವರು ಸಹಾಯ ಮಾಡುವಷ್ಟು ಯಾವ ನಟನೂ ಸಹಾಯ ಮಾಡುವುದಿಲ್ಲ ಎಂಬುದಾಗಿ ಅವರ ಅಭಿಮಾನಿಗಳು ಬಿಂಬಿಸುತ್ತಿದ್ದಾರೆ.. ಒಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪುನೀತ್ ಮತ್ತು ದರ್ಶನ್ ಇಬ್ಬರ ನಡುವೆ ಯಾರು ಹೆಚ್ಚು ಸಹಾಯ ಮಾಡಿದ್ದಾರೆ ಎನ್ನುವುದು ದೊಡ್ಡಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈ ವಿಷಯದ ಬಗ್ಗೆ ಅಪ್ಪು ಅಭಿಮಾನಿಗಳು ಎಲ್ಲರೂ ಕೂಡ ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದು ಇದರ ಬಗ್ಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ತಪ್ಪದೇ ಕಾಮೆಂಟ್ ಮಾಡುವ ಮೂಲಕ ಹಂಚಿಕೊಳ್ಳಿ.