ಅಭಿಷೇಕ್ ಅಂಬರೀಶ್ ಮದುವೆ ಆಗುತ್ತಿರುವ ಹುಡುಗಿಯ ಬಗ್ಗೆ ಸುಮಲತಾ ಅಂಬರೀಶ್ ಮನ ಬಿಚ್ಚಿ ಹೇಳಿದ್ದೇನು ಗೊತ್ತಾ?

ಕನ್ನಡ ಚಿತ್ರರಂಗದ ಕಲಿಯುಗದ ಕಾರಣ ಹಾಗೂ ರೆಬೆಲ್ ಸ್ಟಾರ್ ಅಂಬರೀಶ್ ರವರು ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದರು. ಮಂಡ್ಯದ ಗಂಡು ಎನ್ನುವುದಾಗಿ ಮಂಡ್ಯದ ಜನತೆ ಅಂಬರೀಶ್ ಅವರನ್ನು ಪ್ರೀತಿಯಿಂದ ಕರೆಯುತ್ತಿದ್ದರು. ಅವರ ಅಗಲಿಕೆ ಎನ್ನುವುದು ಅವರ ಅಭಿಮಾನಿಗಳಲ್ಲಿ ದೊಡ್ಡ ಮಟ್ಟದ ಬೇಸರ ಹಾಗೂ ದುಃಖವನ್ನು ಉಂಟು ಮಾಡಿತ್ತು ಆದರೆ ಅವರ ನಂತರ ಅವರ ಮಗ ಜೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ರವರು ಈಗ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ.

ಹೌದು ಗೆಳೆಯರೇ, ವಿದೇಶದಲ್ಲಿ ವಿದ್ಯಾಭ್ಯಾಸವನ್ನು ಪೂರೈಸಿ ಬಂದಂತಹ ಅಭಿಷೇಕ್ ಅಂಬರೀಶ್ ಅವರು ಅಮರ್ ಸಿನಿಮಾದ ಮೂಲಕ ನಾಯಕನಟನಾಗಿ ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಾರೆ. ಈ ಸಿನಿಮಾದಲ್ಲಿ ಅಭಿಷೇಕ್ ಅಂಬರೀಶ್ ಅವರಿಗೆ ತಾನ್ಯಾ ಅವರು ನಾಯಕಿಯಾಗಿ ಕಾಣಿಸಿಕೊಂಡು ಸಿನಿಮಾ ಕೂಡ ಕೊಂಚಮಟ್ಟಿಗೆ ಜನರನ್ನು ಸೆಳೆಯುವಲ್ಲಿ ಯಶಸ್ವಿಯಾಗಿತ್ತು.

ಇದಾದ ನಂತರ ಸದ್ಯಕ್ಕೆ ಈಗ ಅಭಿಷೇಕ್ ಅಂಬರೀಶ್ ಅವರು ಸುಕ್ಕ ಸೂರಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಬ್ಯಾಡ್ ಮ್ಯಾನರ್ಸ್ ಸಿನಿಮಾದಲ್ಲಿ ಖಡಕ್ ಖಾಕಿ, ಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ಜನರ ಮನಸ್ಸನ್ನು ಗೆಲ್ಲಲು ಸಿದ್ಧತೆಯನ್ನು ನಡೆಸಿಕೊಂಡಿದ್ದಾರೆ. ಇನ್ನು ಇತ್ತೀಚಿಗಷ್ಟೇ ಅಂದರೆ ಅಕ್ಟೋಬರ್ ಮೂರರಂದು ಅಭಿಷೇಕ್ ಅಂಬರೀಶ್ ಅವರು ತಮ್ಮ ಜನ್ಮದಿನವನ್ನು ಆಚರಿಸಿಕೊಂಡ ಸಂದರ್ಭದಲ್ಲಿ ಮಾಧ್ಯಮಗಳ ಎದುರು ಸುಮಲತಾ ಅಂಬರೀಶ್ ಅವರು ಒಂದು ಮಾತನಾಡಿದ್ದು ಈಗ ಸಾಕಷ್ಟು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ.

ಹೌದು ಅದೇನೆಂದರೆ ಅತಿ ಶೀಘ್ರದಲ್ಲೇ ಅಭಿಷೇಕ್ ಅಂಬರೀಶ್ ಅವರಿಗೆ ಮದುವೆ ಮಾಡಲು ಹುಡುಗಿಯನ್ನು ಹುಡುಕುತ್ತಿದ್ದೇನೆ ಎಂಬುದಾಗಿ ತಮಾಷೆಯಾಗಿಯೇ ಸುಮಲತಾ ಅಂಬರೀಶ್ ಅವರು ಹೇಳಿಕೆ ನೀಡಿದ್ದರು. ಇದನ್ನು ಕೇಳಿ ಅಭಿಷೇಕ್ ಅಂಬರೀಶ್ ಕೂಡ ತುಸುಕೋಪದಿಂದಲೇ ಅಮ್ಮ ತಮಾಷೆಯಾಗಿ ಹೇಳಿರಬೇಕು ಸದ್ಯಕ್ಕಂತೂ ಮದುವೆ ಇಲ್ಲ ಎಂಬುದಾಗಿ ಹೇಳಿದ್ದಾರೆ. ಇನ್ನು ಅಭಿಷೇಕ್ ಅಂಬರೀಶ್ ಅವರು ಕೂಡ ಒಂದಾದ ಮೇಲೊಂದರಂತೆ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

Leave a Comment

error: Content is protected !!