ರಾಧಿಕಾ ಅನ್ನೋರು ಯಾರು ನನಗೆ ಗೊತ್ತೇ ಇಲ್ಲ ಮಾಜಿ ಮುಖ್ಯಮಂತ್ರಿ

ರಾಧಿಕಾ ಯಾರೋ ಗೊತ್ತಿಲ್ಲ. ಯಾರಪ್ಪ ಅವರೆಲ್ಲ ಎಂದು ಕುಮಾರಸ್ವಾಮಿ ಮಂಡ್ಯದಲ್ಲಿ ಹೇಳಿದ್ದಾರೆ.
2023ಕ್ಕೆ ಕರ್ನಾಟಕ ಜನತಾದಳ ರಾಜ್ಯವಾಗಲಿದೆ. ಜನರು ಒಮ್ಮೆ ನನಗೆ ಐದು ವರ್ಷ ಅವಕಾಶ ಕೊಡಲಿ. ಮುಖ್ಯಮಂತ್ರಿ ಹೇಗೆ ಕೆಲಸ ಮಾಡಬೇಕು ಎಂದು ತೋರಿಸಿಕೊಡುತ್ತೇನೆ. ಹಾಗಾಗದಿದ್ದಲ್ಲಿ ಪಕ್ಷವನ್ನೇ ವಿಸರ್ಜನೆ ಮಾಡುತ್ತೇನೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಭಾನುವಾರ ಇಲ್ಲಿ ಹೇಳಿದರು. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ನೇರಲೆಕೆರೆ ಗ್ರಾಮದಲ್ಲಿ ನಡೆದ ಕುಡಿಯುವ ನೀರಿನ ಯೋಜನೆ ಉಧ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಕುಮಾರಸ್ವಾಮಿಯವರು ಮಾಧ್ಯಮದವರೊಂದಿಗೆ ಮಾತನಾಡುವ ವೇಳೆ ಸಿಸಿಬಿಯಿಂದ ರಾಧಿಕಾ ಕುಮಾರಸ್ವಾಮಿ ವಿಚಾರಣೆ ಹಿನ್ನೆಲೆ ಮಾತನಾಡಿದ ಅವರು ರಾಧಿಕಾ ಯಾರು ಎಂದು ನನಗೆ ಗೊತ್ತಿಲ್ಲ. ಯಾರಪ್ಪ ಅವರೆಲ್ಲ ಎಂದು ಕುಮಾರಸ್ವಾಮಿ ರಾಧಿಕಾ ಕುಮಾರಸ್ವಾಮಿ ವಿಚಾರವಾಗಿ ಪ್ರತಿಕ್ರಿಯೆ ನೀಡದೇ ತೆರಳಿದ್ದಾರೆ. ನಮ್ಮ ಪಕ್ಷಕ್ಕೆ ಬಹುಮತ ಬರದೆ ಇದ್ದರು ನಿಮ್ಮ ಆಶಿರ್ವಾದದ ಮೂಲಕ ಮುಖ್ಯಮಂತ್ರಿ ಆಗಿದ್ದೆ.

ನಾನು ಮುಖ್ಯಮಂತ್ರಿಯಾಗಿದ್ದಾಗ ಜಿಲ್ಲೆಯ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಿದ್ದೆ. ಬಿಜೆಪಿ ಅದನ್ನ ಬೇರೆಡೆಗೆ ವರ್ಗಾಯಿಸಿದರು. ಕಳೆದು ಹೋದ ಸಂದರ್ಭಗಳ ಬಗ್ಗೆ ಯೋಚನೆ ಮಾಡುತ್ತಾ ನಾನು ಕೂರಲ್ಲ. ಮುಂದಿನ ದಿನಗಳಲ್ಲಿ ನಾವು ಸ್ವತಂತ್ರವಾಗಿ ಸರ್ಕಾರದ ಅಧಿಕಾರಕ್ಕೆ ಬರುತ್ತೇವೆ. ಮುಂದಿನ 2023 ಕರ್ನಾಟಕ ರಾಜ್ಯ ಜನತಾದಳದ ರಾಜ್ಯವಾಗಲಿ. ಆ ನಿಟ್ಟಿಲ್ಲಿ ಏನೆಲ್ಲಾ ಪ್ರಯತ್ನಗಳನ್ನು ಮಾಡಬೇಕೋ ಆ ನಿಟ್ಟಿನಲ್ಲಿ ಕೆಲಸವನ್ನು ಮಾಡುತ್ತೇನೆ ಎಂದಿದ್ದಾರೆ. ಇನ್ನೊಂದು ವರ್ಷ ನಾನು ಮುಖ್ಯಮಂತ್ರಿಯಾಗಿ ಮುಂದುವರೆದಿದ್ದರೆ ಹೊಸ ಶುಗರ್ ಫ್ಯಾಕ್ಟರಿ ಮಾಡ್ತಿದ್ದೆ. ನಾನು ಕೊಟ್ಟ ಕಾರ್ಯಕ್ರಮಕ್ಕೆ ನಿನ್ನೆ ಮುಖ್ಯಮಂತ್ರಿ ಕೊಪ್ಪಳದಲ್ಲಿ ಚಾಲನೆ ನೀಡಿದ್ದಾರೆ. ಮುಖ್ಯಮಂತ್ರಿಗಳಿಗೆ ಕನಿಷ್ಠ ಕೃತಜ್ಞತೆ ಸಲ್ಲಿಸುವ ಮನಸ್ಸಿಲ್ಲ. ನನ್ನ ದುರಾದೃಷ್ಟ ನನ್ನ ಸರ್ಕಾರವನ್ನ ತೆಗೆಯಬೇಕು ಅಂತ ಹಲವು ಷಡ್ಯಂತ್ರ ನಡೆಯಿತು.

ಸಕ್ಕರೆ ಕಾರ್ಖಾನೆ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ಅದನ್ನ ಉಳಿಸಿಕೊಡೋದು ನನ್ನ ಜವಾಬ್ದಾರಿ ಎಂದಿದ್ದಾರೆ. ಬಿಜೆಪಿ ಮುಖಂಡರು ರಾಮರಾಜ್ಯದ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ, ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ಸಾಧ್ಯವಾಗುತ್ತಿಲ್ಲ. ರಾಜ್ಯ ಸರ್ಕಾರದಲ್ಲಿ ಹಣ ಇಲ್ಲ ಎನ್ನುತ್ತಾರೆ ಆದರೆ ಲೂಟಿ ಮಾಡಲು ಮಾತ್ರ ಹಣ ಇದೆ. ಚುನಾವಣೆ ಘೋಷಣೆಯಾಗಲಿ, ಎಲ್ಲವನ್ನೂ ಜನರ ಮುಂದಿಡುತ್ತೇನೆ ಎಂದರು.

Leave a Comment

error: Content is protected !!